Breking news
ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕರಿಯಣ್ಣ ಸಂಗಟಿ ಇನ್ನಿಲ್ಲ..

“ಕೊಪ್ಪಳ ಜಿಲ್ಲೆಯ ಹಿರಿಯ ನಾಯಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕರಿಯಣ್ಣ ಸಂಗಟಿ ಅವರು ಇಂದು ವಿಧಿವಶರಾದರು .ತಮ್ಮ ದೀರ್ಘಕಾಲದ ಸಾರ್ವಜನಿಕ ಜೀವನದಲ್ಲಿ ಸರಳತೆ ಮತ್ತು ಜನಪರ ಕಾಳಜಿಗೆ ಹೆಸರಾಗಿದ್ದ ಸಂಗಟಿ ಅವರು, ಜಿಲ್ಲೆಯ ಅಭಿವೃದ್ಧಿಗೆ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದವರು. ಅವರ ನಿಧನದಿಂದ ಜಿಲ್ಲೆಯು ಒಬ್ಬ ಹಿರಿಯ ರಾಜಕೀಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ . ಓಂ ಶಾಂತಿ. ಭಾವಪೂರ್ಣ ಶ್ರದ್ಧಾಂಜಲಿ.”




