Breking news

‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದಲ್ಲಿ ಡಾ.ಕಿಲಾರಿ ಅಭಿಪ್ರಾಯ     

'ಪುಸ್ತಕಗಳು ಸಂಸ್ಕೃತಿ ಜೀವಾಳ'

‘ಪುಸ್ತಕಗಳು ಸಂಸ್ಕೃತಿ ಜೀವಾಳ’

‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದಲ್ಲಿ ಡಾ.ಕಿಲಾರಿ ಅಭಿಪ್ರಾಯ     

ಮುನಿರಾಬಾದ್ : ಇಂದಿನ ಯುಗದಲ್ಲಿ ಯುವ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಮರೆಯುತ್ತಿದ್ದಾರೆ. ನಮ್ಮ ಸಂಸ್ಕೃತಿಯ ಪಳೆಯುಳಿಕೆಗಳು ಉಳಿಯಬೇಕಾದರೆ ಪುಸ್ತಕಕ್ಕೆ ಮಾರು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ನಾಗಣ್ಣ ಕಿಲಾರಿ ಎಂದರು.

ಮುನಿರಾಬಾದ್ ಸಮೀಪದ ಹಿಟ್ನಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮೊಬೈಲ್ ಬಿಡಿ ಪುಸ್ತಕ ಇಡಿ’ ಸರ್ಕಾರದ ಸದಾಶಯವಾಗಿದೆ. ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಪುಸ್ತಕಗಳು ಸಹಕಾರಿಯಾಗಲಿವೆ ಎಂದರು. ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದ ಸಂಚಾಲಕ ಡಾ.ನಿಂಗಪ್ಪ ಕಂಬಳಿ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗಾಗಿ ಪ್ರಾಧಿಕಾರವು ಹಾಕಿಕೊಂಡ ಮಹತ್ವಪೂರ್ಣ ಯೋಜನೆ ಇದಾಗಿದೆ. ಪ್ರಾಧಿಕಾರದ ಸದಾಶಯ ಈಡೇರಬೇಕಾದರೆ ಮನಸ್ಸು ಕೆಡಿಸುವ ಹಲವು ವಸ್ತುಗಳನ್ನು ಮೆಚ್ಚುವುದನ್ನು ಬಿಟ್ಟು ಪುಸ್ತಕ ಮೆಚ್ಚುವ ಕೆಲಸವಾಗಬೇಕು. ಕನ್ನಡ ಸಾಹಿತ್ಯ ಸಮೃದ್ಧವಾಗಿದ್ದು ಬಹಳಷ್ಟು ಪುಸ್ತಕಗಳು ಬದುಕಿಗೆ ದಾರಿ ದೀಪವಾಗಲಿವೆ ಎಂದರು.

ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಡಾ.ತಿಪ್ಪೇರುದ್ರ ಸಂಡೂರು ಅವರು ಇಡೀ ಕನ್ನಡ ಸಾಹಿತ್ಯದ ಮಹತ್ವದ ಗ್ರಂಥಗಳನ್ನು ಪರಿಚಯಿಸುತ್ತ ನಾವೆಲ್ಲ ಪುಸ್ತಕಗಳನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು, ಇವತ್ತು ಹಲವಾರು ಮಹನೀಯರ ಬದುಕಿನ ಏರಿಳಿತಗಳನ್ನು ಗಮನಿಸಿದಾಗ ಅವರನ್ನು ಮಹತ್ವದ ಸ್ಥಾನದಲ್ಲಿರಿಸಿದ್ದು ಪುಸ್ತಕಗಳು ಎಂಬುದನ್ನು ನಾವು ಮರೆಯುವಂತಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಟಿ. ಎಚ್. ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಗುವ ಅನಿವಾರ್ಯತೆ ಇದೆ. ಯುವ ಪೀಳಿಗೆಗಳು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಇಂಥ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ನನ್ನ ಮೆಚ್ಚಿದ ಪುಸ್ತಕ ಅಭಿಪ್ರಾಯ ಮಂಡನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜಯಲಕ್ಷ್ಮಿ, ದ್ವಿತೀಯ ಸ್ಥಾನ ಚೈತ್ರ, ತೃತೀಯ ಸ್ಥಾನ ಸಿಂಧು ವಿದ್ಯಾರ್ಥಿನಿಯರಿಗೆ ಬಹುಮಾನ ನೀಡಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚಿಗಟೇರಿ ಗಜೇಂದ್ರಗಡ, ಎರಿಸ್ವಾಮಿ, ಕವಿತಾ, ಸೋಮನಾಥ, ವಿಶ್ವನಾಥ, ಆಂಜನೇಯ, ವೆಂಕಟೇಶ, ಪ್ರಿಯ ಮುಂತಾದವರು ಉಪಸ್ಥಿತರಿದ್ದರು. ಚಂದ್ರಶೇಖರ ನಿರೂಪಿಸಿದರು. ಕವಿತಾ ಪ್ರಾರ್ಥಿಸಿದರು. ಈರಯ್ಯ ವಕ್ಕುಂದಮಠ ಸ್ವಾಗತಿಸಿದರು. ಪೂಜಾ ಸುಬೇದಾರ ವಂದಿಸಿದರು.

ಫೋಟೋ:

ಮುನಿರಾಬಾದ್ ಸಮೀಪದ ಹಿಟ್ನಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

Related Articles

Leave a Reply

Your email address will not be published. Required fields are marked *

Back to top button